ಆದಿಕಾಂಡ

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50


ಅಧ್ಯಾಯ 32

ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
2 ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್‌ ಎಂದು ಹೆಸರಿಟ್ಟನು.
3 ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
4 ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
5 ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
6 ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
7 ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
8 ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.
9 ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
10 ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್‌ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
11 ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
12 ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
13 ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
14 ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;
15 ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು;
16 ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.
17 ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ
18 ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
19 ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
20 ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
21 ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.
22 ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್‌ ಎಂಬ ಸ್ಥಳದಲ್ಲಿ ದಾಟಿದನು.
23 ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.
24 ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
25 ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
26 ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
27 ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು.
28 ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
29 ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
30 ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್‌ ಎಂದು ಹೆಸರಿಟ್ಟನು.
31 ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.
32 ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್‌ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.