ಮಾರ್ಕನು

1 2 3 4 5 6 7 8 9 10 11 12 13 14 15 16


ಅಧ್ಯಾಯ 11

ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
2 ನಿಮ್ಮ ಎದುರಾಗಿರುವ ಹಳ್ಳಿಗೆ ಹೋಗಿರಿ; ನೀವು ಅದರೊಳಗೆ ಪ್ರವೇಶಿಸುತ್ತಲೇ ಯಾರು ಎಂದಿಗೂ ಅದರ ಮೇಲೆ ಕೂತುಕೊಳ್ಳದಿರುವ ಒಂದು ಕತ್ತೇಮರಿಯನ್ನು ಅಲ್ಲಿ ಕಾಣುವಿರಿ; ಅದನ್ನು ಬಿಚ್ಚಿ ತಕ್ಕೊಂಡು ಬನ್ನಿರಿ.
3 ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
4 ಆಗ ಅವರು ಹೊರಟು ಹೋಗಿ ಎರಡು ದಾರಿಗಳು ಕೂಡುವ ಸ್ಥಳದಲ್ಲಿ ಹೊರಗೆ ಬಾಗಲಿನ ಬಳಿಯಲ್ಲಿ ಕಟ್ಟಿದ್ದ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ
5 ಅಲ್ಲಿ ನಿಂತವರಲ್ಲಿ ಕೆಲವರು ಅವರಿಗೆ--ಆ ಕತ್ತೇಮರಿಯನ್ನು ಏನು ಮಾಡುತ್ತೀರಿ ಎಂದು ಕೇಳಿದರು.
6 ಅದಕ್ಕೆ ಅವರು ಯೇಸು ಅಪ್ಪಣೆ ಕೊಟ್ಟಂತೆಯೇ ಹೇಳಿದರು. ಆಗ ಅವರು ಅವರಿಗೆ ಹೋಗಗೊಡಿಸಿದರು.
7 ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.
8 ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು; ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು.
9 ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
10 ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
11 ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
12 ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು;
13 ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
14 ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.
15 ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
16 ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ.
17 ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
18 ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
19 ಸಂಜೆಯಾದಾಗ ಆತನು ಪಟ್ಟಣದ ಹೊರಗೆ ಹೋದನು.
20 ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
21 ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು.
22 ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.
23 ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
24 ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
25 ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
26 ನೀವು ಕ್ಷಮಿಸದಿದ್ದರೆ ಪರ ಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಅಪರಾಧ ಗಳನ್ನು ಕ್ಷಮಿಸುವದಿಲ್ಲ.
27 ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
28 ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
29 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ಪ್ರಶ್ನೆಯನ್ನು ನಿಮ್ಮಿಂದ ಕೇಳುತ್ತೇನೆ, ನನಗೆ ಉತ್ತರಕೊಡಿರಿ; ಆಗ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.
30 ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು.
31 ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು;
32 ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.
33 ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.